ಕೃಷಿ ಇಲಾಖೆಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ
ಈಗಾಗಲೇ ಕೃಷಿ ಹೊಂಡಗಳು, ಇತರೆ ಕಾಮಗಾರಿಯನ್ನು ಅನುಷ್ಠಾನ ಮಾಡಿಕೊಳ್ಳಲು ಅರ್ಜಿ ಆಹ್ವಾನ ಕರೆದಿದ್ದು ಹಲವಾರು ರೈತರು ಅರ್ಜಿ ಸಲ್ಲಿಸಿದ್ದಾರೆ. ಹಲವಾರು ಜಿಲ್ಲೆಗಳಲ್ಲಿ ರೈತರಿಂದ ಅರ್ಜಿ ಕರೆದಿದ್ದು ಕೃಷಿಭಾಗ್ಯ ಯೋಜನೆಯು ಮರು ಜಾರಿಗೊಂಡಿದ್ದು ಗೋಕಾಕ ಮತ್ತು ಮೂಡಲಗಿ ತಾಲೂಕಿನ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ರೈತ ಬಾಂಧವರು ತಮ್ಮ ಹೋಬಳಿ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಗಳಲ್ಲಿ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಲು ಕೋರಲಾಗಿದೆ. ಈಗಾಗಲೇ 2014-15 ರಿಂದ 2019-20 ರವರೆಗೆ ಕೃಷಿ ಭಾಗ್ಯ ಯೋಜನೆಯಲ್ಲಿ ಸವಲತ್ತು ಪಡೆದಿರುವ ರೈತರು ಈಗ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ (Gl Wire Fencing) ಕೃಷಿ ಹೊಂಡದಲ್ಲಿ ಆಕಸ್ಮಿಕ ಅವಘಡಗಳು/ ಪ್ರಾಣ ಹಾನಿ ಸಂಭವಿಸದಂತೆ ತಡೆಯಲು ಕಡ್ಡಾಯವಾಗಿ ತಂತಿ ಬೇಲಿ ನಿರ್ಮಾಣ.
ಕೃಷಿ ಹೊಂಡದಿಂದ ನೀರು ಎತ್ತಲು ಪಂಪ್ ಸೆಟ್ ಹೊಂಡದಲ್ಲಿ ಸಂಗ್ರಹಣೆಯಾದ ನೀರನ್ನು ಬೆಳೆಗಳಿಗೆ ಬಳಸಿಕೊಳ್ಳಲು ಡೀಸೆಲ್ /ಪೆಟ್ರೋಲ್/ ಸೋಲಾರ್ ಪಂಪ್ ಸೆಟ್ ಖರೀದಿಸಲು ಅವಕಾಶ.
ರಾಜ್ಯದಲ್ಲಿ ಮಳೆಯಾಶ್ರಿತ ರೈತ ಸಮುದಾಯದ ಜೀವನೋಪಾಯವನ್ನು ಉತ್ತಮಪಡಿಸಲು “ಕೃಷಿಭಾಗ್ಯ”(Krishi honda) ಯೋಜನೆ ಪ್ರಸಕ್ತ ಸಾಲಿನಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು. 2024-25ನೇ ಸಾಲಿನಲ್ಲಿ ಮರು ಜಾರಿಗೊಳಿಸಿದ್ದು ಪ್ರಸಕ್ತ ಸಾಲಿನಲ್ಲಿ ವಿಪತ್ತು ಉಪಶಮನ ನಿಧಿ(SDMF-State Disaster Mitigation Fund) ಯೋಜನೆಯಲ್ಲಿಯೂ ಕೃಷಿ ಭಾಗ್ಯ ಯೋಜನೆಯಲ್ಲಿಯೂ ಅನುಷ್ಠಾನ ಮಾಡಲು ಈ ಯೋಜನೆ ಜಾರಿಗೆ ತರಲಾಗಿದೆ ಎಂದು ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕೃಷಿ ಹೊಂಡ ಪಡೆಯುವ ರೈತರನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ?
ಅದೇ ರೀತಿ ಈಗ ಮುಖ್ಯವಾಗಿ ಹೇಳಬೇಕೆಂದರೆ 2023-24 ನೇ ಸಾಲಿನ ಕೃಷಿ ಭಾಗ್ಯ ಯೋಜನೆಯ ಅಡಿಯಲ್ಲಿ ಅರ್ಜಿಗಳನ್ನು ಸಲ್ಲಿಸಿರುವ ರೈತರಿಗೇ ಈ ಮೂಲಕ ತಿಳಿಸುವುದೇನಂದರೆ ರೈತ ಸಂಪರ್ಕ ಕೇಂದ್ರದಲ್ಲಿ ಅರ್ಹ ಫಲಾನುಭವಿಗಳನ್ನು ಲಾಟರಿ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸಿದ ಪ್ರತಿಯೊಬ್ಬ ರೈತರ ಅಪ್ಲಿಕೇಶನ್ಗಳನ್ನು ಹಾಗೂ ಅವರು ಹಿಂದೆ ಪಡೆದ ಸರ್ಕಾರಿ ಸೌಲಭ್ಯಗಳನ್ನು ಪರಿಗಣನೆ ಮಾಡಿದ ನಂತರ ಫಲಾನುಭವಿಗಳನ್ನು ಕರೆಸಿ ಲಾಟರಿ ಮೂಲಕ ಆಯ್ಕೆ ಮಾಡಲಾಗುವುದು.
ರಾಜ್ಯದಲ್ಲಿ ಸರ್ಕಾರವು ಕೂಡ ಕೃಷಿಭಾಗ್ಯಕ್ಕೆ ಸರ್ಕಾರ ಸಮ್ಮತಿ ಒದಗಿಸಿದ್ದು ಮಳೆಯಾಶ್ರಿತ ಕೃಷಿ ಭೂಮಿಗೆ ಕೃಷಿ ಹೊಂಡಗಳ ಮೂಲಕ ನೀರಿನ ಸೌಲಭ್ಯ ಒದಗಿಸುವ ಕೃಷಿಭಾಗ್ಯ ಯೋಜನೆಯನ್ನು 200 ಕೋಟಿ ರೂ. ವೆಚ್ಚದಲ್ಲಿ ಜಾರಿ ಮಾಡಲು ಸರ್ಕಾರ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ 100 ಕೋಟಿ ರೂ. ವೆಚ್ಚದಲ್ಲಿ ಕೃಷಿಭಾಗ್ಯ ಯೋಜನೆ ಜಾರಿ ಮಾಡುವುದಾಗಿ ಘೋಷಣೆ ಮಾಡಿದ್ದರು. ಅದರ ಜತೆಗೆ ಹೆಚ್ಚುವರಿ 100 ಕೋಟಿ ರೂ.ಗಳನ್ನು ಕಂದಾಯ ಇಲಾಖೆಯ ವಿಪತ್ತು ನಿರ್ವಹಣೆಯಡಿ ಪಡೆದುಕೊಳ್ಳಲು ಕಳೆದ ಸಚಿವ ಸಂಪುಟ ಸಭೆಯಲ್ಲಿ ಸಮ್ಮತಿ ನೀಡಲಾಗಿತ್ತು.
ನೀರನ್ನು ಬೆಳೆಗೆ ಹಾಯಿಸಲು ಸೂಕ್ಷ್ಮ(ತುಂತುರು/ಹನಿ ನೀರಾವರಿ –
ಕೃಷಿ ಹೊಂಡಗಳಲ್ಲಿ ಸಂಗ್ರಹವಾದ ಮಳೆ ನೀರನ್ನು ಬೆಳೆಗಳಿಗೆ ಸಂದಿಗ್ಧ ಹಂತಗಳಲ್ಲಿ ರಕ್ಷಣಾತ್ಮಕ ನೀರಾವರಿಗಾಗಿ ಬಳಸಿಕೊಳ್ಳಲು ಸೂಕ್ಷ್ಮ ನೀರಾವರಿ ಘಟಕ ಅನುಷ್ಠಾನ.
ತಾಲ್ಲೂಕುವಾರು ನಿಗದಿ ಪಡಿಸಲಾಗಿರುವ ವಾರ್ಷಿಕ ಗುರಿಯನ್ವಯ ರಾಯಚೂರು ಸಾಮಾನ್ಯ 53 ವಿಶೇಷ ಘಟಕ ಯೋಜನೆ 12 ಗಿರಿಜನ ಉಪ ಯೋಜನೆ 5 ಒಟ್ಟು 70, ದೇವದುರ್ಗ ಸಾಮಾನ್ಯ 53 ವಿಶೇಷ ಘಟಕ ಯೋಜನೆ 12 ಗಿರಿಜನ ಉಪ ಯೋಜನೆ 5 ಒಟ್ಟು 70, ಮಾನ್ವಿ ಸಾಮಾನ್ಯ 53 ವಿಶೇಷ ಘಟಕ ಯೋಜನೆ 12 ಗಿರಿಜನ ಉಪ ಯೋಜನೆ 5 ಒಟ್ಟು 70.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು –
* ತಮ್ಮ ಖಾತೆ, ಕಂಬೈನ್ಸ್ ಉತಾರ, ಆಧಾರ ಕಾರ್ಡ್, ಬ್ಯಾಂಕ್ ಪಾಸ್ಬುಕ್ ಝರಾಕ್ಸ್ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿದ್ದರೆ ಜಾತಿ ಪ್ರಮಾಣ ಪತ್ರ, ಮುಚ್ಚಳಿಕೆ ಪತ್ರ ಹಾಗೂ ತೋಟಗಾರಿಕೆ ಮತ್ತು ಮೀನುಗಾರಿಕೆ ಇಲಾಖೆಯಿಂದ ಪಡೆದ ಎನ್ಒಸಿ ಪತ್ರವನ್ನು ಲಗತ್ತಿಸಬೇಕು.
ಹನಿ ನೀರಾವರಿಗೂ ಈ ಯೋಜನೆಯ ಅಡಿಯಲ್ಲಿ ಎಷ್ಟು ಹಣ ನೀಡಲಾಗುತ್ತದೆ?
ಕೃಷಿಯಲ್ಲಿ ಅದು ಮಳೆ ಕಡಿಮೆ ಬೀಳುವ ಪ್ರದೇಶದಲ್ಲಿ ಇದರ ಲಾಭವಾಗಲಿದೆ. ಬಯಲು ಸೀಮೆ ಜಿಲ್ಲೆ ಕೋಲಾರದಲ್ಲಿ ನೀರಾವರಿಗೆ ಅನನುಕೂಲವಿದೆ. ಈ ಸಂದರ್ಭದಲ್ಲಿ ಹನಿ ನೀರಾವರಿ ಮತ್ತು ತುಂತು ನೀರಾವರಿ ಯೋಜನೆಗಳಿಂದ ಸಾಕಷ್ಟು ಅನುಕೂಲವಾಗಿದೆ.
ನೀರಿನ ಅಭಾವದಲ್ಲಿ ಈ ಯೋಜನೆಯ ಮೂಲಕ ತೋಟಗಾರಿಕೆ ಮತ್ತು ಕೃಷಿ ಬೆಳೆಗಳನ್ನು ಬೆಳೆಯಲು ಸಾಧ್ಯವಾಗಿದೆ, ಜಿಲ್ಲೆಯ ರೈತರು ಕಷ್ಟ ಜೀವಿಗಳು ನೀರಿಗೆ ಎಷ್ಟೇ ಸಮಸ್ಯೆ ಇದ್ದರೂ ಬೆಳೆ ಬೆಳೆಯುವುದನ್ನು ಮಾತ್ರ ನಿಲ್ಲಿಸುವುದಿಲ್ಲ.
ಅದೇ ರೀತಿ ಈಗ ರಾಜ್ಯದಲ್ಲಿ ಹವಾಮಾನ, ಮಳೆ ಮತ್ತು ಗಾಳಿ ಸಕಾಲಕ್ಕೆ ದೊರಕದೇ ಇರುವುದರಿಂದ ಬರಗಾಲದಂತ ಪರಿಸ್ಥಿತಿ ಎದುರಿಸುತ್ತಿರುವ ರೈತರು ಈಗ ಹಲವಾರು ಆರ್ಥಿಕ ನಷ್ಟಕ್ಕೆ ಸಿಲುಕಿದ್ದಾರೆ.
ಪಟ್ಟಣದ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರ ಕಾರ್ಯಾಲಯದ ಸಭಾಂಗಣದಲ್ಲಿ ಹಮ್ಮಿಕೊಂಡ ಕೃಷಿ ಇಲಾಖೆಯ ವಿವಿಧ ಯೋಜನೆಗಳಿಗೆ ಚಾಲನೆ ಹಾಗೂ ಕೃಷಿ ಸಲಕರಣೆಗಳ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು, ವಿಜ್ಞಾನ, ತಂತ್ರಜ್ಞಾನ ಬೆಳದಂತೆ ಯಾಂತ್ರಿಕ ಕೃಷಿ ಅಧಿಕವಾಗಿದ್ದು, ದಿನನಿತ್ಯ ಓಡಾಡಲು ವಾಹನಗಳು ಕೂಡ ಅಧಿಕವಾಗಿರುವುದರಿಂದ ನಮ್ಮ ನಿಸರ್ಗ ಮತ್ತು ಕೃಷಿಯ ಮೇಲೆ ದುಷ್ಪರಿಣಾಮ ಬೀರಿದೆ.
ಹಾಗೆಯೇ ಕೃಷಿಯಲ್ಲಿ ಅತಿಯಾದ ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ಬಳಕೆಯಿಂದ ನಮ್ಮೆಲ್ಲರ ಆರೋಗ್ಯದ ಮೇಲೆ ದುಷ್ಪರಿಣಾಮವಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು. ಜಿಲ್ಲಾ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿ, ನಮ್ಮ ರೈತರ ಭೂಮಿಗಳು ಮತ್ತು ಫಲವತ್ತಾದ ಮಣ್ಣು ಹಾಳಾಗದಂತೆ ಸಂರಕ್ಷಣೆ ಮಾಡಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ.
ಮುಖ್ಯವಾಗಿ ಫ್ರುಟ್ ಐಡಿ ಇದ್ದರೆ ರೈತರು ತಮ್ಮ ಜಮೀನಿನ ಸಂಪೂರ್ಣ ಮಾಹಿತಿ ಹಾಗೂ ರೈತರು ಎಷ್ಟು ಸರ್ಕಾರದ ಯೋಜನೆ ಹಾಗೂ ಸರ್ಕಾರದ ಕಡೆಯಿಂದ ಯಾವ ಯಾವ ಬೀಜ, ಗೊಬ್ಬರ, ಹೊಸ ಹೊಸ ಯೋಜನೆಗಳನ್ನು ಅಳವಡಿಸಿಕೊಳ್ಳುತ್ತಾರೆ ಎಂಬುದನ್ನು ಸುಲಭವಾಗಿ ನೋಡಬಹುದು.
ಅದೇ ರೀತಿ ಫ್ರುಟ್ ಐಡಿಯಿಂದ ರೈತರ ಮಕ್ಕಳಿಗೆ ಶಿಕ್ಷಣಕ್ಕೆ ಆರ್ಥಿಕ ಸಹಾಯ ಮಾಡುವ ನಿಟ್ಟಿನಲ್ಲಿ ಸರ್ಕಾರವು ಸ್ಕಾಲರ್ಶಿಪ್ ಅನ್ನು ಅಂದರೆ ರೈತ ವಿದ್ಯಾನಿಧಿ ಹಣವನ್ನು ರೈತರ ಮಕ್ಕಳಿಗೆ ಅವರ ಫ್ರುಟ್ ಐಡಿ ಮೂಲಕ ಹಾಕುತ್ತಾರೆ.
ಫ್ರುಟ್ಸ ಐಡಿ/FID ಪಡೆಯಲು ಬೇಕಾಗುವ ದಾಖಲೆಗಳು –
• ಅರ್ಜಿ ಫಾರ್ಮ್.
• ಆಧಾರ್ ಕಾರ್ಡ್.
• ಉತಾರ (ಪಹಣಿ).
• ಇತ್ತೀಚೆಗೆ ತೆಗೆದುಕೊಂಡ ಭಾವಚಿತ್ರ.
• ಬ್ಯಾಂಕ್ ಪಾಸ್ ಬುಕ್.
ಮುಖ್ಯವಾಗಿ ಯಾವುದೇ ಸಬ್ಸಿಡಿ ಪಡೆಯಲು ಬೇಕಾಗುವ ದಾಖಲೆಗಳು –
• ಅರ್ಜಿ ಫಾರ್ಮ್.
• ಆಧಾರ್ ಕಾರ್ಡ್.
• 20 ರೂಪಾಯಿ ಬಾಂಡ್.
• ಉತಾರ (ಪಹಣಿ).
• ಇತ್ತೀಚೆಗೆ ತೆಗೆದುಕೊಂಡ ಭಾವಚಿತ್ರ.
• ಬ್ಯಾಂಕ್ ಪಾಸ್ ಬುಕ್.
• ಎಸಿ ಎಸ್ಟಿ ಸದಸ್ಯರು ಜಾತಿ ಪ್ರಮಾಣ ಪತ್ರ ಕಡ್ಡಾಯವಾಗಿ ಹೊಂದಿರಬೇಕು.